• myspiritualvoice2025@gmail.com

அப்போஸ்தலர் - 13

புதிய ஏற்பாடு

Header
shape
புதிய ஏற்பாடு
அப்போஸ்தலர் - 13

1. ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.

2. ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.

3. ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು.

4. ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವ ರಾಗಿ ಸೆಲ್ಯೂಕ್ಯಕ್ಕೆ ಹೊರಟುಹೋದರು. ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರಕ್ಕೆ ಹೋದರು.

5. ಅವರು ಸಲವಿಾಸಿನಲ್ಲಿದ್ದಾಗ ಯೆಹೂದ್ಯರ ಸಭಾ ಮಂದಿರಗಳಲ್ಲಿ ದೇವರವಾಕ್ಯವನ್ನು ಸಾರಿದರು. ಯೋಹಾನನು ಸಹ ಪರಿಚಾರಕನಾಗಿ ಅವರ ಸಂಗಡ ಇದ್ದನು.

6. ಅವರು ದ್ವೀಪದ ಮಾರ್ಗವಾಗಿ ಪಾಫೋಸಿಗೆ ಬಂದು ಅಲ್ಲಿ ಒಬ್ಬ ಸುಳ್ಳು ಪ್ರವಾದಿಯೂ ಮಂತ್ರವಾದಿಯೂ ಆಗಿದ್ದ ಬಾರ್‌ಯೇಸು ಎಂಬ ಒಬ್ಬ ಯೆಹೂದ್ಯನನ್ನು ಕಂಡರು.

7. ಅವನು ಬುದ್ಧಿವಂತನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಸಂಗಡ ಇದ್ದನು. ಅಧಿಪತಿಯು ಬಾರ್ನಬ ಸೌಲರನ್ನು ಕರೆಯಿಸಿ ದೇವರ ವಾಕ್ಯವನ್ನು ಕೇಳುವದಕ್ಕೆ ಅಪೇಕ್ಷಿಸಿದನು.

8. ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ).

9. ಆಗ ಸೌಲನು (ಇವನು ಪೌಲನೆಂಬದಾಗಿಯೂ ಕರೆಯಲ್ಪಟ್ಟವನು) ಪವಿತ್ರಾತ್ಮಭರಿತನಾಗಿ ಅವನನ್ನು ದೃಷ್ಟಿಸಿ ನೋಡಿ--

10. ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ?

11. ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.

12. ಆಗ ಅಧಿಪತಿಯು ನಡೆದದ್ದನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬಿದನು.

13. ತರುವಾಯ ಪೌಲನೂ ಅವನ ಜೊತೆ ಯಲ್ಲಿದ್ದವರೂ ಪಾಫೋಸನ್ನು ಬಿಟ್ಟು ಪಂಪುಲ್ಯದಲ್ಲಿದ್ದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು;

29. ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು.

30. ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.

31. ಆತನು ಯೆರೂಸಲೇಮಿಗೆ ಗಲಿಲಾಯ ದಿಂದ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರ್ಯಂತರ ಕಾಣಿಸಿಕೊಂಡನು. ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.

32. ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ.

33. ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ.

34. ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು.

35. ಅದಕ್ಕನುಸಾರವಾಗಿ ಆತನು--ನೀನು ನಿನ್ನ ಪರಿ ಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿ ಸುವದಿಲ್ಲವೆಂದು ಬೇರೊಂದು ಕೀರ್ತನೆಯಲ್ಲಿಯೂ ಹೇಳುತ್ತಾನೆ.

36. ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.

37. ಆದರೆ ದೇವರು ಎಬ್ಬಿಸಿದಾತನು ಕೊಳೆಯುವ ಅವಸ್ಥೆಯನ್ನು ನೋಡಲೇ ಇಲ್ಲ.

14. ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‌ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.

38. ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ

15. ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.

39. ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.

16. ಆಗ ಪೌಲನು ಎದ್ದು ಕೈಸನ್ನೆಮಾಡಿ ಹೇಳಿದ್ದೇನಂದರೆ--ಇಸ್ರಾಯೇಲ್‌ ಜನರೇ, ದೇವರಿಗೆ ಭಯಪಡುವವರೇ, ಕೇಳಿರಿ.

17. ಈ ಇಸ್ರಾಯೇಲ್‌ ಜನರ ದೇವರು ನಮ್ಮ ಪಿತೃ ಗಳನ್ನು ಆರಿಸಿಕೊಂಡು ಆ ಜನರು ಐಗುಪ್ತದೇಶದಲ್ಲಿ ಪ್ರವಾಸವಾಗಿದ್ದಾಗ ಅವರನ್ನು ವೃದ್ಧಿಗೆ ತಂದು ತನ್ನ ಭುಜಬಲದಿಂದ ಆ ದೇಶದೊಳಗಿಂದ ಬರಮಾಡಿ ದನು.

40. ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ.

18. ಆತನು ಸುಮಾರು ನಾಲ್ವತ್ತು ವರುಷಗಳ ವರೆಗೂ ಅಡವಿಯಲ್ಲಿ ಅವರ ನಡಾವಳಿಯನ್ನು ಸಹಿಸಿ ಕೊಂಡು

41. ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.

19. ಕಾನಾನ್‌ ದೇಶದಲ್ಲಿದ್ದ ಏಳು ಜನಾಂಗ ಗಳನ್ನು ನಿರ್ಮೂಲ ಮಾಡಿದ ಮೇಲೆ ಚೀಟು ಹಾಕಿ ಆ ದೇಶವನ್ನು ಅವರಿಗೆ ಹಂಚಿಕೊಟ್ಟನು.

42. ಯೆಹೂದ್ಯರು ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಅನ್ಯಜನರು ಈ ಮಾತುಗಳನ್ನು ಬರುವ ಸಬ್ಬತ್‌ ದಿನದಲ್ಲಿಯೂ ತಮಗೆ ಸಾರಬೇಕೆಂದು ಕೇಳಿಕೊಂಡರು.

20. ಇದಾದ ಮೇಲೆ ಪ್ರವಾದಿಯಾದ ಸಮುವೇಲನ ವರೆಗೆ ಸುಮಾರು ನಾನೂರೈವತ್ತು ವರುಷ ಆತನು ಅವರಿಗೆ ನ್ಯಾಯಸ್ಥಾಪಕರನ್ನು ಕೊಟ್ಟನು.

43. ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.

21. ತರುವಾಯ ಅವರು ತಮಗೆ ಅರಸನು ಬೇಕೆಂದು ಅಪೇಕ್ಷೆಪಟ್ಟಾಗ ದೇವರು ಅವರಿಗೆ ಬೆನ್ಯಾವಿಾನನ ಗೋತ್ರದ ಕೀಷನ ಮಗನಾದ ಸೌಲನನ್ನು ನಾಲ್ವತ್ತು ವರುಷದ ವರೆಗೆ ಕೊಟ್ಟನು.

44. ಮುಂದಿನ ಸಬ್ಬತ್‌ ದಿನದಲ್ಲಿ ಹೆಚ್ಚು ಕಡಿಮೆ ಪಟ್ಟಣದಲ್ಲಿದ್ದವರೆಲ್ಲಾ ದೇವರ ವಾಕ್ಯವನ್ನು ಕೇಳುವದಕ್ಕೆ ಕೂಡಿಬಂದರು.

22. ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ

45. ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.

23. ಇವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಯೇಸು ಎಂಬ ಒಬ್ಬ ರಕ್ಷಕನನ್ನು ಎಬ್ಬಿಸಿದ್ದಾನೆ.

46. ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.

24. ಆತನ ಆಗಮನಕ್ಕೆ ಮುಂಚೆ ಯೋಹಾನನು ಮೊದಲು ಇಸ್ರಾಯೇಲ್‌ ಜನರೆ ಲ್ಲರಿಗೆ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.

47. ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.

25. ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರಿವಾಗ ಜನರಿಗೆ--ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ; ಆದರೆ ಇಗೋ, ನನ್ನ ಹಿಂದೆ ಒಬ್ಬಾತನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.

48. ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.

26. ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.

27. ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್‌ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.

49. ತರುವಾಯ ಕರ್ತನ ವಾಕ್ಯವು ಆ ಪ್ರಾಂತ್ಯದ ಎಲ್ಲಾ ಕಡೆಯಲ್ಲಿ ಸಾರಲ್ಪಟ್ಟಿತು.

28. ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.

50. ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.

51. ಇವರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಬಂದರು.

52. ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.