11. ಇದಲ್ಲದೆ ಫಿಲಿಷ್ಟಿಯರಲ್ಲಿ ಕೆಲವರು ಯೆಹೋ ಷಾಫಾಟನಿಗೆ ಕಾಣಿಕೆಗಳನ್ನೂ ಕಪ್ಪದ ಹಣವನ್ನೂ ತಂದರು, ಅರಬ್ಬಿ ದೇಶದವರು ತಮ್ಮ ಮಂದೆಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ ಏಳು ಸಾವಿರದ ಏಳು ನೂರು ಹೋತಗಳನ್ನೂ ತಂದರು.
12. ಹೀಗೆ ಯೆಹೋಷಾಫಾಟನು ಬರಬರುತ್ತಾ ಬಹಳ ದೊಡ್ಡವನಾಗಿ ಯೆಹೂದದಲ್ಲಿ ಕೋಟೆ ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.
13. ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿ ಬಹಳ ಕೆಲಸಗಳನ್ನು ನಡಿಸುತ್ತಾ ಇದ್ದನು. ಪರಾಕ್ರಮಶಾಲಿಗಳಾದ ಯುದ್ಧದ ಮನುಷ್ಯರು ಯೆರೂ ಸಲೇಮಿನಲ್ಲಿದ್ದರು.
14. ತಮ್ಮ ಪಿತೃಗಳ ಮನೆಯ ಪ್ರಕಾರ ವಾಗಿರುವ ಅವರ ಲೆಕ್ಕವೇನಂದರೆ, ಯೆಹೂದದ ಸಹಸ್ರಗಳ ಅಧಿಪತಿಗಳಲ್ಲಿ ಅದ್ನನು ಮುಖ್ಯಸ್ಥನಾಗಿ ದ್ದನು; ಅವನ ಸಂಗಡ ಪರಾಕ್ರಮಶಾಲಿಗಳು ಮೂರು ಲಕ್ಷಮಂದಿ ಇದ್ದರು.
1. ಅವನ ಮಗನಾದ ಯೆಹೋಷಾಫಾಟನು ಅವನಿಗೆ ಬದಲಾಗಿ ಆಳಿದನು;
15. ಅವನ ತರುವಾಯ ಅಧಿಪತಿ ಯಾದ ಯೆಹೋಹಾನಾನನು; ಅವನ ಸಂಗಡ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯು.
2. ಅವನು ಇಸ್ರಾಯೇಲಿಗೆ ವಿರೋಧವಾಗಿ ತನ್ನನ್ನು ಬಲಪಡಿಸಿ ಕೊಂಡನು. ಇದಲ್ಲದೆ ಅವನು ಯೆಹೂದದಲ್ಲಿ ಸಮಸ್ತ ಕೋಟೆಯುಳ್ಳ ಪಟ್ಟಣಗಳಲ್ಲಿ ಸೈನ್ಯವನ್ನು ಇಟ್ಟು ಯೆಹೂ ದದಲ್ಲಿಟ್ಟ ಹಾಗೆ ತನ್ನ ತಂದೆಯಾದ ಆಸನು ತೆಗೆದು ಕೊಂಡ ಎಫ್ರಾಯಾಮಿನ ಪಟ್ಟಣಗಳಲ್ಲಿ ಸೈನ್ಯಗಳನ್ನು ಇಟ್ಟನು.
16. ಇವನ ತರುವಾಯ ಕರ್ತನಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ ಎರಡು ಲಕ್ಷಮಂದಿ ಪರಾಕ್ರಮಶಾಲಿಗಳು.
3. ಯೆಹೋಷಾಫಾಟನು ಬಾಳೀಮ್ ನನ್ನು ಹುಡುಕದೆ ತನ್ನ ತಂದೆಯಾದ ದಾವೀದನ ಮೊದಲಿನ ಮಾರ್ಗಗಳಲ್ಲಿ ನಡೆದದ್ದರಿಂದ ಕರ್ತನು ಅವನ ಸಂಗಡ ಇದ್ದನು.
4. ತನ್ನ ತಂದೆಯ ದೇವರನ್ನು ಹುಡುಕಿ ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ ಆತನ ಆಜ್ಞೆಗಳಲ್ಲಿ ನಡೆದನು.
17. ಬೆನ್ಯಾವಿಾನ್ಯರಲ್ಲಿ ಪರಾಕ್ರಮಶಾಲಿಯಾದ ಎಲ್ಯಾದ ವನು; ಅವನ ಸಂಗಡ ಬಿಲ್ಲನ್ನೂ ಗುರಾಣಿಯನ್ನೂ ಧರಿಸಿಕೊಂಡಿರುವ ಎರಡು ಲಕ್ಷ ಮಂದಿಯು.
18. ಇವನ ತರುವಾಯ ಯೆಹೋಜಾಬಾದನು; ಅವನ ಸಂಗಡ ಯುದ್ಧಕ್ಕೆ ಸಿದ್ಧವಾಗಿರುವ ಲಕ್ಷದ ಎಂಭತ್ತು ಸಾವಿರ ಮಂದಿಯು.
19. ಅರಸನಿಂದ ಸಮಸ್ತ ಯೆಹೂದ ದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇರಿಸಲ್ಪಟ್ಟ ವರ ಹೊರತಾಗಿ ಇವರು ಅರಸನ ಬಳಿಯಲ್ಲಿ ಕಾಯುತ್ತಿದ್ದರು.
5. ಆದದರಿಂದ ಕರ್ತನು ರಾಜ್ಯವನ್ನು ಅವನ ಕೈಯಲ್ಲಿ ಸ್ಥಿರಪಡಿಸಿದನು. ಯೆಹೂದ ವೆಲ್ಲವೂ ಯೆಹೋಷಾಫಾಟನಿಗೆ ಕಾಣಿಕೆಯನ್ನು ಕೊಟ್ಟ ದ್ದರಿಂದ ಅವನಿಗೆ ಐಶ್ವರ್ಯವೂ ಘನತೆಯೂ ಅಧಿಕ ವಾಗಿ ದೊರಕಿತು.
6. ಅವನ ಹೃದಯವು ಕರ್ತನ ಮಾರ್ಗಗಳಲ್ಲಿ ಎತ್ತಲ್ಪಟ್ಟಿತು. ಇದಲ್ಲದೆ ಅವನು ಯೆಹೂ ದದಲ್ಲಿದ್ದ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ತೆಗೆದು ಹಾಕಿದನು.
7. ಇದಲ್ಲದೆ ಅವನ ಆಳ್ವಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಪ್ರಧಾನರಾದ ಬೆನ್ಹೈಲನನ್ನೂ ಓಬದ್ಯನನ್ನೂ ಜೆಕರ್ಯನನ್ನೂ ನೆತನೇಲನನ್ನೂ ವಿಾಕಾ ಯನನ್ನೂ ಯೆಹೂದದ ಪಟ್ಟಣಗಳಲ್ಲಿ ಬೋಧಿಸಲು ಕರೇಕಳುಹಿಸಿದನು.
8. ಅವರ ಸಂಗಡ ಲೇವಿಯರಾದ ಶೆಮಾಯನನ್ನೂ ನೆತನ್ಯನನ್ನೂ ಜೆಬದ್ಯನನ್ನೂ ಅಸಾ ಹೇಲನನ್ನೂ ಶೆವಿಾರಾಮೋತನನ್ನೂ ಯೆಹೋನಾತಾ ನನ್ನೂ ಅದೋನೀಯನನ್ನೂ ಟೋಬೀಯನನ್ನೂ ಟೋಬದೋನಿಯನನ್ನೂ ಇವರ ಸಂಗಡ ಯಾಜಕ ರಾದ ಎಲೀಷಾಮನನ್ನೂ ಯೆಹೋರಾಮನನ್ನೂ ಕಳು ಹಿಸಿದನು.
9. ಇವರು ಯೆಹೂದದಲ್ಲಿ ಬೋಧಿಸಿದರು. ಅವರ ಬಳಿಯಲ್ಲಿ ಕರ್ತನ ನ್ಯಾಯಪ್ರಮಾಣದ ಪುಸ್ತಕ ಇತ್ತು; ಯೆಹೂದದ ಸಮಸ್ತ ಪಟ್ಟಣಗಳನ್ನು ಸಂಚರಿಸಿ ಜನರಿಗೆ ಬೋಧಿಸಿದರು.
10. ಕರ್ತನ ಭಯವು ಯೆಹೂದದ ಸುತ್ತಲಿರುವ ದೇಶಗಳ ಸಮಸ್ತ ರಾಜ್ಯಗಳ ಮೇಲೆ ಇದ್ದದ್ದರಿಂದ ಅವರು ಯೆಹೋಷಾಫಾಟನ ಮೇಲೆ ಯುದ್ಧಮಾಡ ಲಿಲ್ಲ.